ಬೆಳಗಾವಿ, ಜುಲೈ.10: ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕರ್ನಾಟಕದ 13 ಜಿಲ್ಲೆಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಉತ್ತರ ಕರ್ನಾಟಕ ವಿಕಾಸ ವೇದಿಕೆ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸುವರ್ಣಸೌಧವನ್ನು ಉತ್ತರ ಕರ್ನಾಟಕದ ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು, ಸುವರ್ಣ ಸೌಧದಲ್ಲಿ ಸೆಕ್ರೇಟಿಯಟ್ ಕಚೇರಿ ಆರಂಭಿಸಬೇಕು, ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಲಾಯಿತು.
